ADVERTISEMENT

ಅಯೋಧ್ಯೆ: ಮಸೀದಿ ನಿರ್ಮಾಣ ಯೋಜನೆಗೆ ಅಸ್ತು ನಿರ್ಮಾಣ ಯೋಜನೆಗೆ ಅಸ್ತು

ಅಯೋಧ್ಯೆ: ಮಸೀದಿ ನಿರ್ಮಾಣ ಯೋಜನೆಗೆ ಅಸ್ತು ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಗೆ ಅಸ್ತು ಮಸೀದಿ ನಿರ್ಮಾಣ ಯೋಜನೆಗೆ ಅಸ್ತು

Malte Treplin
Published 7 ಮಾರ್ಚ್ 2023, 10:23 IST
Last Updated 7 ಮಾರ್ಚ್ 2023, 10:23 IST
Dansika
Dansika   

ಅಯೋಧ್ಯೆ (ಪಿಟಿಐ): ಅಯೋಧ್ಯೆ ಯಲ್ಲಿ ಧನ್ನಿಪುರ್‌ ಮಸೀದಿ ನಿರ್ಮಾಣ ಯೋಜನೆಗೆ ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ಅಂತಿಮ ಅನುಮೋದನೆ ನೀಡಿದೆ.

ರಾಮಜನ್ಮಭೂಮಿ–ಬಾಬ್ರಿ ಮಸೀದಿ ವಿವಾದ ಪ್ರಕರಣದ ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ಮಸೀದಿಯನ್ನು ನಿರ್ಮಾಣ ಮಾಡಲು ಉತ್ತರ ಪ್ರದೇಶ ಸರ್ಕಾರವು ಐದು ಎಕರೆ ಭೂಮಿಯನ್ನು ಮಂಜೂರು ಮಾಡಿದೆ.

ಮಸೀದಿಯ ಜೊತೆಗೆ ಆಸ್ಪತ್ರೆ, ಸಂಶೋಧನಾ ಸಂಸ್ಥೆ, ಸಮುದಾಯ ಅಡುಗೆಮನೆ, ಗ್ರಂಥಾಲಯವನ್ನು ನಿರ್ಮಾಣ ಮಾಡಲು ಇಂಡೊ–ಇಸ್ಲಾಮಿಕ್‌ ಸಾಂಸ್ಕೃತಿಕ ಫೌಂಡೇಷನ್ (ಐಐಸಿಎಫ್‌) ನಿರ್ಧರಿಸಿದೆ. ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರವು (ಎಡಿಎ) ಅನುಮೋದನೆ ನೀಡುವುದು ವಿಳಂಬ ಮಾಡಿದ್ದರಿಂದಾಗಿ ನಿರ್ಮಾಣ ಚಟುವಟಿಕೆ ಇದುವರೆಗೂ ಆರಂಭ ವಾಗಿರಲಿಲ್ಲ.

ADVERTISEMENT

‘ಮಸೀದಿ ನಿರ್ಮಾಣ ಯೋಜನೆಗೆ ಅನುಮೋದನೆ ನೀಡ ಲಾಗಿದೆ. ಒಂದೆರಡು ದಿನಗಳಲ್ಲಿ ಅನುಮೋದನೆ ಪಡೆದ ನಕ್ಷೆಯನ್ನು ಐಐಸಿಎಫ್‌ ಪ್ರತಿನಿಧಿಗಳಿಗೆ ನೀಡ ಲಾಗುವುದು’ ಎಂದು ಎಡಿಎನ ಹೆಚ್ಚುವರಿ ಆಯುಕ್ತ ಗೌರವ್‌ ದಯಾಳ್‌ ತಿಳಿಸಿದರು.

ಐಐಸಿಎಪ್‌ ಕಾರ್ಯದರ್ಶಿ ಅತ್ತಾರ್ ಹುಸೇನ್‌ ಅವರು, ಮಂಜೂರಾತಿಯ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಂಡ ಬಳಿಕ ಮಸೀದಿ ನಿರ್ಮಾಣ ಯೋಜನೆಗೆ ಅಂತಿಮರೂಪ ನೀಡಲು ಟ್ರಸ್ಟ್ ಸಭೆ ನಡೆಸಲಿದೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.