ADVERTISEMENT

‘ಬಿಜೆಪಿ, ಕಾಂಗ್ರೆಸ್‌ ದೂತರು ಸಂಪರ್ಕದಲ್ಲಿ..’

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಸಚಿವ ಕೆ.ಸಿ.ನಾರಾಯಣಗೌಡ ಮತ್ತು ಸಿ.ಪಿ.ಯೋಗೇಶ್ವರ್‌ ನನ್ನೊಂದಿಗೆ ಮಾತನಾಡಿಲ್ಲ. ಯಾರೇ ಪಕ್ಷಕ್ಕೆ ಬಂದರೂ ಸ್ವಾಗತಿಸುವೆ’ ಎಂದರು.

​ಪ್ರಜಾವಾಣಿ ವಾರ್ತೆ
Published 29 ಮಾರ್ಚ್ 2023, 14:04 IST
Last Updated 29 ಮಾರ್ಚ್ 2023, 14:04 IST
People take part in Kesarda Kandad Onji Dina programme, organised by Karavali Samskruthika Chavadi, at Mysuru on Sunday July 16, 2017- PHOTO / IRSHAD MAHAMMAD
People take part in Kesarda Kandad Onji Dina programme, organised by Karavali Samskruthika Chavadi, at Mysuru on Sunday July 16, 2017- PHOTO / IRSHAD MAHAMMAD   

JRM

ಬೆಂಗಳೂರು: ಬಿಜೆಪಿ ಮತ್ತು ಕಾಂಗ್ರೆಸ್‌ ಹೈಕಮಾಂಡ್‌ನ ದೂತರು ಈಗಾಗಲೇ ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ‘ಎರಡೂ ಪಕ್ಷಗಳ ಸ್ಥಳೀಯ ನಾಯಕರು ಜೆಡಿಎಸ್‌ ಕುರಿತು ಲಘುವಾಗಿ ಮಾತನಾಡುತ್ತಿದ್ದಾರೆ. ಜೆಡಿಎಸ್‌ ಪಕ್ಷವನ್ನು ಮಗಿಸಿಬಿಟ್ಟಿದ್ದೇವೆ ಎನ್ನುವವರೂ ಇದ್ದಾರೆ. ಕೆಲವರು 140–150 ಸ್ಥಾನ ಗೆಲ್ಲುವ ಮಾತನಾಡುತ್ತಿದ್ದಾರೆ. ಆದರೆ, ಜೆಡಿಎಸ್‌ನ ಬೆಳವಣಿಗೆಯಿಂದ ಎರಡೂ ಪಕ್ಷದ ವರಿಷ್ಠರು ಕಂಗೆಟ್ಟಿದ್ದಾರೆ. ಅವರ ದೂತರು ಚರ್ಚೆಗೆ ಬಂದಿದ್ದಾರೆ. ಸಹಜವಾಗಿ ಅವರೊಂದಿಗೆ ಚರ್ಚಿಸಿದ್ದೇನೆ’ ಎಂದು ಹೇಳಿದರು.

ADVERTISEMENT

‘ಮೀಸಲಾತಿ ಹಂಚಿಕೆಯನ್ನು ಪರಿಷ್ಕರಿಸಲು ಬಿಜೆಪಿ ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕೆ ನನ್ನ ಬೆಂಬಲವಿಲ್ಲ. ಸಂವಿಧಾನದ ಆಶಯದಂತೆ ಮೀಸಲಾತಿ ಹಂಚಿಕೆಗೆ ನಮ್ಮ ಬೆಂಬಲ. ಮೀಸಲಾತಿ ಹೆಸರಿನಲ್ಲಿ ಜಾತಿ– ಜಾತಿಗಳ ನಡುವೆ ವೈಷಮ್ಯ ಸೃಷ್ಟಿಸುವ ತೀರ್ಮಾನಕ್ಕೆ ಬೆಂಬಲ ನೀಡುವುದಿಲ್ಲ’ ಎಂದು ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

Highlights -

ಜೆಡಿಎಸ್, ಕಾಂಗ್ರೆಸ್ ನಮ್ಮ ಪ್ರತಿಸ್ಪರ್ಧಿ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ‘ಜೆಡಿಎಸ್ ಮತ್ತು ಕಾಂಗ್ರೆಸ್ ನಮ್ಮ ಪ್ರತಿಸ್ಪರ್ಧಿಗಳು. ಯಾರ ಜೊತೆಗೂ ನಾವು ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ’ ಎಂದು ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

Quote - ‘ಹೊರಗೆ ಅವರು ಏನನ್ನಾದರೂ ಮಾತನಾಡಲಿ. ಒಳಗಡೆ ಬೇರೆಯೇ ಪರಿಸ್ಥಿತಿ ಇದೆ. ಬಿಜೆಪಿ ಮತ್ತು ಕಾಂಗ್ರೆಸ್‌ 75 ಸ್ಥಾನಗಳನ್ನು ದಾಟುವುದಿಲ್ಲ ಎಂದು ಕೆಲವು ಅಧಿಕಾರಿಗಳೇ ಚರ್ಚೆ ನಡೆಸಿದ್ದಾರೆ. ನಮ್ಮ ಶಕ್ತಿ ಏನು ಎಂಬುದು ನನಗೆ ಗೊತ್ತಿದೆ. 123 ಸ್ಥಾನ ಗಳಿಸುವುದೇ ನನ್ನ ಗುರಿ. ಅದಕ್ಕಾಗಿ ಏಪ್ರಿಲ್‌ 10ರವರೆಗೂ ಪಂಚರತ್ನ ರಥಯಾತ್ರೆ ಮುಂದುವರಿಸುತ್ತೇನೆ’ ಎಂದು ಹೇಳಿದರು. Cut-off box -

‘ಶ್ರೀರಂಗಪಟ್ಟಣಕ್ಕೆ ಬಹಳ ದೊಡ್ಡ ಇತಿಹಾಸವಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮುಂತಾದವರು ಇತಿಹಾಸಕ್ಕೆ ಅಪಚಾರ ಮಾಡುವ ಕೆಲಸ ಮಾಡಿದ್ದರು. ಒಕ್ಕಲಿಗ ಸಮುದಾಯಕ್ಕೆ ಕೆಟ್ಟ ಹೆಸರು ತರಲು ಮುಂದಾಗಿದ್ದರು. ಅವರ ಪ್ರಯತ್ನ ಸಫಲವಾಗಲಿಲ್ಲ’ ಎಂದರು.

} Graphic text / Statistics - ಬಿಜೆಪಿ– ಜೆಡಿಎಸ್‌ ಹೊಂದಾಣಿಕೆ–ಡಿಕೆಶಿ (ಮಂಡ್ಯ ವರದಿ): ‘ಬಿಜೆಪಿ– ಜೆಡಿಎಸ್‌ ಹೊಂದಾ ಣಿಕೆ ಬಗ್ಗೆ ಬಿಜೆಪಿಯ ಸಿ.ಪಿ.ಯೋಗೇಶ್ವರ್‌ ಅವರೇ ಮಾತನಾಡಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ನಾನು ಮಾತನಾಡಬೇಕಾಗಿಲ್ಲ. ಮಾಧ್ಯಮಗಳೇ ವ್ಯಾಖ್ಯಾನ ಮಾಡಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.