ADVERTISEMENT

ರಾಮಮಂದಿರದ ಲೆಕ್ಕ ಕೇಳಲು ಕುಮಾರಸ್ವಾಮಿ ಯಾರು: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2021, 6:01 IST
Last Updated 18 ಅಕ್ಟೋಬರ್ 2021, 6:01 IST
ಕೆ.ಎಸ್‌. ಈಶ್ವರಪ್ಪ
ಕೆ.ಎಸ್‌. ಈಶ್ವರಪ್ಪ   

ಶಿವಮೊಗ್ಗ: ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಎಚ್‌.ಡಿ. ಕುಮಾರಸ್ವಾಮಿ ಯಾರು? ಒಂದು ರೂಪಾಯಿಯನ್ನೂ ಕೊಡದೇ ಪುಗಸಟ್ಟೆ ಲೆಕ್ಕ ಕೇಳುವ ಅಧಿಕಾರ ಕುಮಾರಸ್ವಾಮಿಗೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮಮಂದಿರ ನಿರ್ಮಾಣಕ್ಕೆ ಹಣ ಕೊಟ್ಟಿದ್ದರೆ ಕುಮಾರಸ್ವಾಮಿ ಅವರು ಲೆಕ್ಕ ಕೇಳಲಿ. ಅವರು ಒಂದು ಪೈಸೆಯನ್ನೂ ಕೊಟ್ಟಿಲ್ಲ’ ಎಂದು ತಿರುಗೇಟು ನೀಡಿದರು.

ಬಿಜೆಪಿ ಎಂದರೆ ಗೆಲುವಿನ ಪಕ್ಷ: ಬಿಜೆಪಿ ಅಭ್ಯರ್ಥಿಗಳು ಚುನಾವಣೆಯಲ್ಲಿ ಸ್ಪರ್ಧಿಸಿದರೆ ಗೆಲ್ಲುತ್ತಾರೋ ಇಲ್ಲವೋ ಎಂದು ಕಾದುನೋಡಬೇಕಾದ ಪರಿಸ್ಥಿತಿ ಹಿಂದೆ ಇತ್ತು. ಈಗ ಆ ಪರಿಸ್ಥಿತಿ ಇಲ್ಲ. ಬಿಜೆಪಿ ಎಂದರೆ ಗೆಲುವಿನ ಪಕ್ಷ ಎನ್ನುವಷ್ಟರ ಮಟ್ಟಿಗೆ ಬೆಳೆದಿದೆ. ಹಾನಗಲ್ ಮತ್ತು ಸಿಂದಗಿ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ADVERTISEMENT
ಸಾರಾಂಶ

ಶಿವಮೊಗ್ಗ: ರಾಮಮಂದಿರ ನಿರ್ಮಾಣದ ಲೆಕ್ಕ ಕೇಳಲು ಎಚ್‌.ಡಿ. ಕುಮಾರಸ್ವಾಮಿ ಯಾರು? ಒಂದು ರೂಪಾಯಿಯನ್ನೂ ಕೊಡದೇ ಪುಗಸಟ್ಟೆ ಲೆಕ್ಕ ಕೇಳುವ ಅಧಿಕಾರ ಕುಮಾರಸ್ವಾಮಿಗೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ವಾಗ್ದಾಳಿ ನಡೆಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.