ADVERTISEMENT

ಪದಾಧಿಕಾರಿಗಳಿಗೆ ಆದೇಶ ಪತ್ರ ವಿತರಣೆ  

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2024, 11:39 IST
Last Updated 13 ಫೆಬ್ರುವರಿ 2024, 11:39 IST

ವಿಜಯಪುರ: ನಗರದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಹುಲ್ ಕುಬಕಡ್ಡಿ ಹಾಗೂ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಮಂಗಳವಾರ ವಿತರಿಸಿದರು.

ನೂತನ ಜಿಲ್ಲಾ ಉಪಾಧ್ಯಕ್ಷರಾಗಿ ಸಂಪತ್ತ ಜಮಾದಾರ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ನಜೀರ ನಂದರಗಿ, ವಿಜಯಪುರ ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಅರುಣಗೌಡ ತೇರದಾಳ ಹಾಗೂ ತಾಲ್ಲೂಕು ಉಪಾಧ್ಯಕ್ಷರಾಗಿ ಮಹಾದೇವಪ್ಪ ತೇಲಿ ಅವರಿಗೆ ಆದೇಶ ಪತ್ರ ನೀಡಿ ಶಾಲು ಹೊದಿಸಿದರು.

ಮಹಿಳಾ ಅಧ್ಯಕ್ಷ ರೇಖಾ ಪಾಟೀಲ, ದೇವರಹಿಪ್ಪರಗಿ ತಾಲ್ಲೂಕು ಅಧ್ಯಕ್ಷ ಈರಪ್ಪ ಕುಳೆಕುಮಟಗಿ, ತಿಕೋಟಾ ತಾಲ್ಲೂಕು ಅಧ್ಯಕ್ಷ ಸಾತಲಿಂಗಯ್ಯ ಸಾಲಿಮಠ, ಚಡಚಣ ತಾಲ್ಲೂಕು ಅಧ್ಯಕ್ಷ ಮಹಾದೇವ ಬನಸೋಡೆ, ತಾಳಿಕೋಟಿ ತಾಲ್ಲೂಕು ಅಧ್ಯಕ್ಷ ಶ್ರೀಶೈಲ ವಾಲಿಕಾರ ಇದ್ದರು.

ADVERTISEMENT

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.