ADVERTISEMENT

ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2022, 5:53 IST
Last Updated 21 ಜನವರಿ 2022, 5:53 IST

ಸುರಪುರ: ತಾಲ್ಲೂಕಿನ ಸತ್ಯಂಪೇಟೆ ಗ್ರಾಮದ ಮಲ್ಲಿಕಾರ್ಜುನ ಮಲ್ಕಪ್ಪ ದೇವತ್ಕಲ್ (45) ಎಂಬ ರೈತ ಕ್ರಿಮಿನಾಶಕ ಸೇವಿಸಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

‘11 ಎಕರೆ ಜಮೀನು ಇದೆ. ಯಾವುದೇ ಬ್ಯಾಂಕಿನಲ್ಲಿ ಸಾಲ ಮಾಡಿಲ್ಲ. ಆದರೆ, ಸುಮಾರು ಜನರ ಬಳಿ ₹15 ರಿಂದ 20 ಲಕ್ಷ ಕೈಗಡ ಸಾಲ ಮಾಡಿಕೊಂಡಿದ್ದರು. ಸಾಲ ತೀರಿಸಲಾರದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತನ ಪತ್ನಿ ದೂರಿನಲ್ಲಿ ತಿಳಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಮೃತ ಮಲ್ಲಿಕಾರ್ಜುನ ಅವರದ್ದು ಬಡತನದ ದೊಡ್ಡ ಕುಟುಂಬ. ಬೆಳೆಗೆ ಸರಿಯಾದ ಬೆಲೆ ಸಿಗದೆ ನಷ್ಟ ಅನುಭವಿಸಿದ್ದ. ಸಾಲ ತೀರಿಸಲಾಗದೆ ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ರಾಜ್ಯ ರೈತ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಮಲ್ಲಿಕಾರ್ಜುನ ಸತ್ಯಂಪೇಟ ಆಗ್ರಹಿಸಿದ್ದಾರೆ.

ADVERTISEMENT
ಸಾರಾಂಶ

ಸುರಪುರ: ತಾಲ್ಲೂಕಿನ ಸತ್ಯಂಪೇಟೆ ಗ್ರಾಮದ ಮಲ್ಲಿಕಾರ್ಜುನ ಮಲ್ಕಪ್ಪ ದೇವತ್ಕಲ್ (45) ಎಂಬ ರೈತ ಕ್ರಿಮಿನಾಶಕ ಸೇವಿಸಿ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.