ADVERTISEMENT

ಲಾಕ್‌ಡೌನ್‌, ಕಠಿಣ ನಿಯಮ ಇಲ್ಲ: ಶುಕ್ರವಾರದ ಸಭೆ ಬಳಿಕ ಮುಂದಿನ ತೀರ್ಮಾನ: ಅಶೋಕ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 13:15 IST
Last Updated 17 ಜನವರಿ 2022, 13:15 IST
ಆರ್ ಅಶೋಕ
ಆರ್ ಅಶೋಕ   

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ ಕಾರಣಕ್ಕೆ ಲಾಕ್‌ಡೌನ್ ಅಥವಾ ಇನ್ನಷ್ಟು ಕಠಿಣ ನಿಯಮ ಜಾರಿಗೆ ತರುವ ಉದ್ದೇಶವಿಲ್ಲ. ವಾರಂತ್ಯ ಕರ್ಫ್ಯೂ ಮುಂದುವರಿಸಬೇಕೆ ಅಥವಾ ಸಡಿಲಗೊಳಿಸಬೇಕೇ ಎಂಬ ಬಗ್ಗೆ ಶುಕ್ರವಾರ ತುರ್ತುಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೋವಿಡ್‌ ಕುರಿತ ವರ್ಚುವಲ್‌ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ತಜ್ಞರ ಪ್ರಕಾರ ಇದೇ 25 ಅಥವಾ 26 ರ ಸುಮಾರಿಗೆ ಕೋವಿಡ್‌ ಪ್ರಕರಣಗಳು ತಾರಕಕ್ಕೆ ಹೋಗಿ ಬಳಿಕ ಇಳಿಕೆಯಾಗಬೇಕು. ಅದನ್ನು ನೋಡಿಕೊಂಡು ಮುಂದಿನ ತೀರ್ಮಾನ ಮಾಡಬೇಕಾಗಿದೆ. ಪ್ರಕರಣಗಳು ಇಳಿಕೆಯಾದರೆ ನಿಯಮಗಳನ್ನು ಸಡಿಲಿಸಲಾಗುವುದು ಎಂದರು.

ADVERTISEMENT

ಬೆಂಗಳೂರು ಸೇರಿ ರಾಜ್ಯದ ಎಲ್ಲೆಡೆ ಶುಕ್ರವಾರದವರೆಗೆ ಶಾಲಾ–ಕಾಲೇಜುಗಳು ಯಥಾಸ್ಥಿತಿ ಮುಂದುವರೆಯಲಿವೆ. ಬಳಿಕ ಆ ಬಗ್ಗೆಯೂ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.

ಸಾರಾಂಶ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಕೋವಿಡ್‌ ಕುರಿತ ವರ್ಚುವಲ್‌ ಸಭೆಯ ಬಳಿಕ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.