ADVERTISEMENT

a25m ನೇಹಾ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Piyush KUMAR
Published 25 ಏಪ್ರಿಲ್ 2024, 5:23 IST
Last Updated 25 ಏಪ್ರಿಲ್ 2024, 5:23 IST
<div class="paragraphs"><p>ಹುಬ್ಬಳ್ಳಿಯ ನೇಹಾ ಕೊಲೆ ಆರೋಪಿಗೆ ಶಿಕ್ಷೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿ ಡಾ.ನಯನಾ ಅವರಿಗೆ ಮನವಿ ಸಲ್ಲಿಸಿದರು</p></div>

ಹುಬ್ಬಳ್ಳಿಯ ನೇಹಾ ಕೊಲೆ ಆರೋಪಿಗೆ ಶಿಕ್ಷೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಉಪವಿಭಾಗಾಧಿಕಾರಿ ಡಾ.ನಯನಾ ಅವರಿಗೆ ಮನವಿ ಸಲ್ಲಿಸಿದರು

   

ಭಟ್ಕಳ: ಹುಬ್ಬಳ್ಳಿಯ ನೇಹಾ ಹಿರೇಮಠ ಅವರನ್ನು ಕೊಲೆ ಮಾಡಿದ ಆರೋಪಿಗೆ ಉತ್ತರ ಪ್ರದೇಶದ ಸರ್ಕಾರದ ಮಾದರಿಯಲ್ಲಿ ನೇರ ಕ್ರಮಕ್ಕೆ ಆಗ್ರಹಿಸಿ ಭಟ್ಕಳ ವಿಶ್ವ ಹಿಂದೂ ಪರಿಷತ್ ವತಿಯಿಂದ ಬುಧವಾರ ಭಟ್ಕಳ ಉಪವಿಭಾಗಾಕಾರಿ ಡಾ.ನಯನಾ ಅವರಿಗೆ ಮನವಿ ಸಲ್ಲಿಸಲಾಯಿತು.

ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆವನ್ನು ಹಿಂದೂ ಸಮಾಜ ಕಠೋರವಾಗಿ ಖಂಡಿಸುತ್ತದೆ. ಇದಕ್ಕೆಲ್ಲ ಮುಖ್ಯ ಕಾರಣ ಇಂತಹ ದುಷ್ಟ ಮತಾಂ ಶಕ್ತಿಗಳ ವಿರುದ್ಧ ಈಗಿನ ರಾಜ್ಯ ಸರ್ಕಾರದ ಮೃದು ಧೋರಣೆ ಕಾರಣವಾಗಿರುತ್ತದೆ. ಈ ಯುವತಿಯನ್ನು ಕೊಲೆಗೈಯುತ್ತಿರುವ ನೇರ ವಿಡಿಯೊ ಸಾಕ್ಷಾಧಾರಗಳು ಇರುವುದರಿಂದ ಜಿಹಾದಿ ಮಾನಸಿಕತೆಯ ಈ ಯುವಕನನ್ನು ಕೂಡಲೇ ಕೋರ್ಟ್‌ ಮುಖಾಂತರ ವಿಚಾರಣೆ ನಡೆಸಿ ಗಲ್ಲಿಗೇರಿಸಿ ಅಥವಾ ಉತ್ತರ ಪ್ರದೇಶದ ಮಾದರಿಯಲ್ಲಿ ನೇರ ಕ್ರಮ ಕೈಗೊಳ್ಳಬೇಕು ಎಂದರು.

ADVERTISEMENT

ಮಾಜಿ ಶಾಸಕ ಸುನೀಲ ನಾಯ್ಕ, ಪ್ರಮುಖರಾದ ಲಕಷನಾರಾಯಣ ನಾಯ್ಕ, ಶ್ರೀಕಾಂತ ನಾಯ್ಕ ಆಸರಕೇರಿ, ರಾಜೇಶ ನಾಯ್ಕ, ದಿನೇಶ ನಾಯ್ಕ, ಶಂಕರ ಶೆಟ್ಟಿ, ಕೇಶವ ನಾಯ್ಕ, ಶ್ರೀನಿವಾಸ ನಾಯ್ಕ, ಆನಂದ ನಾಯ್ಕ, ಈಶ್ವರ ನಾಯ್ಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.