ಉದ್ಯಮದ ಪ್ರತಿನಿಧಿಗಳ ಜೊತೆ ಮಾತುಕತೆಯಲ್ಲಿ ಪಾಲ್ಗೊಂಡ ಅವರು, ‘ಸಾಂಕ್ರಾಮಿಕದ ಸಂದರ್ಭದಲ್ಲಿ ತೊಂದರೆಗೆ ಒಳಗಾದವರಿಗೆ ಹಣ ವರ್ಗಾವಣೆ ಮಾಡುವಲ್ಲಿ ತಂತ್ರಜ್ಞಾನ ನೆರವಿಗೆ ಬಂದಿದೆ. ಶಿಕ್ಷಣ ಹಾಗೂ ಕೃಷಿ ವಲಯಗಳಲ್ಲಿ ಡಿಜಿಟಲ್ ತಂತ್ರಜ್ಞಾನದ ನೆರವು ಪಡೆಯುವುದು ಹೇಗೆ ಎಂಬ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ’ ಎಂದರು.