ವೃತ್ತಿಯಲ್ಲಿ ಪತ್ರಕರ್ತರಾಗಿರುವ ಪರ್ವೇಜ್ ಪರ್ವಾಜ್ ಎಂಬವರೇ ದಂಡ ತೆತ್ತವರು. 2007 ಜನವರಿ 27 ರಂದು ನಡೆದ ಮೊಹರಂ ಮೆರವಣಿಗೆಯಲ್ಲಿ ಎರಡು ಪಂಗಡಗಳ ನಡುವೆ ಜಗಳ ಉಂಟಾಗಿ, ಓರ್ವ ಹಿಂದೂ ವ್ಯಕ್ತಿ ಮೃತಪಟ್ಟಿದ್ದರು. ಈ ಘಟನೆಗೆ ಅಂದಿನ ಗೋರಖಪುರ ಸಂಸದರಾಗಿದ್ದ ಯೋಗಿ ಆದಿತ್ಯನಾಥ್ ಅವರು ಮಾಡಿದ ಭಾಷಣವೇ ಕಾರಣ. ಹೀಗಾಗಿ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಪರ್ವೇಜ್, 2008ರ ಸೆಪ್ಟೆಂಬರ್ 26 ರಂದು ದೂರು ಸಲ್ಲಿಸಿದ್ದರು.