ವಿಜಯನಗರ / ಹುಬ್ಬಳ್ಳಿ: ಮಹಾ ಶಿವರಾತ್ರಿ ಅಂಗವಾಗಿ, ಹಂಪಿಯ ವಿರೂಪಾಕ್ಷ ದೇವಾಲಯ ಮತ್ತು ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಹಂಪಿಯಲ್ಲಿ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಹರಿಯುವ ತುಂಗಭದ್ರಾ ನದಿಯಲ್ಲಿ ಮಿಂದೆದ್ದ ನೂರಾರು ಭಕ್ತರು, ದೇಗುಲದ ವರೆಗೆ ಬರಿಗಾಲಲ್ಲಿ ನಡೆದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಸಿದ್ಧಾರೂಢರ ದರ್ಶನ ಪಡೆಯಲು ಜನರು ಬೆಳಿಗ್ಗೆಯಿಂದಲೇ ಸರದಿಯಲ್ಲಿ ನಿಂತಿದ್ದರು