‘ಅಪರಾಧ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನವೀನ್ ಕುಮಾರ್ ವಿರುದ್ಧ ಸುಶಾನ್ ಇತ್ತೀಚೆಗೆ ದೂರು ನೀಡಿದ್ದರು. ಅದೇ ಪ್ರಕರಣದಲ್ಲಿ ನವೀನ್ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದಲೇ ಸುಶಾನ್ ಅವರಿಗೆ ಕರೆ ಮಾಡಿದ್ದ ಆರೋಪಿ, ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ, ಜೀವಂತ ಬಿಡುವುದಿಲ್ಲವೆಂದು ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.