×
ADVERTISEMENT
ಈ ಕ್ಷಣ :
ADVERTISEMENT

ಜೈಲಿನಿಂದ ಕರೆ ಮಾಡಿ ಜೀವ ಬೆದರಿಕೆ

ಫಾಲೋ ಮಾಡಿ
Comments

ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಜೈಲು ಸೇರಿರುವ ನವೀನ್‌ ಕುಮಾರ್ ಎಂಬಾತ ನಗರದ ನಿವಾಸಿಯೊಬ್ಬರಿಗೆ ಮೊಬೈಲ್‌ನಿಂದ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸ್ಥಳೀಯ ನಿವಾಸಿ ಸುಶಾನ್ ಎಂಬುವರು ದೂರು ನೀಡಿದ್ದಾರೆ. ಜೀವ ಬೆದರಿಕೆ ಆರೋಪದಡಿ ನವೀನ್‌ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಅಪರಾಧ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ನವೀನ್‌ ಕುಮಾರ್ ವಿರುದ್ಧ ಸುಶಾನ್ ಇತ್ತೀಚೆಗೆ ದೂರು ನೀಡಿದ್ದರು. ಅದೇ ಪ್ರಕರಣದಲ್ಲಿ ನವೀನ್‌ನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಜೈಲಿನಿಂದಲೇ ಸುಶಾನ್‌ ಅವರಿಗೆ ಕರೆ ಮಾಡಿದ್ದ ಆರೋಪಿ, ದೂರು ಹಿಂಪಡೆಯುವಂತೆ ಒತ್ತಾಯಿಸಿದ್ದಾನೆ. ಇಲ್ಲದಿದ್ದರೆ, ಜೀವಂತ ಬಿಡುವುದಿಲ್ಲವೆಂದು ಕೊಲೆ ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ’ ಎಂದೂ ಮೂಲಗಳು ತಿಳಿಸಿವೆ.

ಅಪರಾಧ ಪ್ರಕರಣವೊಂದರಲ್ಲಿ ಜೈಲು ಸೇರಿರುವ ನವೀನ್‌ ಕುಮಾರ್ ಎಂಬಾತ ನಗರದ ನಿವಾಸಿಯೊಬ್ಬರಿಗೆ ಮೊಬೈಲ್‌ನಿಂದ ಕರೆ ಮಾಡಿ ಜೀವ ಬೆದರಿಕೆಯೊಡ್ಡಿದ್ದು, ಈ ಸಂಬಂಧ ಬಾಣಸವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಸ್ಥಳೀಯ ನಿವಾಸಿ ಸುಶಾನ್ ಎಂಬುವರು ದೂರು ನೀಡಿದ್ದಾರೆ. ಜೀವ ಬೆದರಿಕೆ ಆರೋಪದಡಿ ನವೀನ್‌ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT