‘ಕೆಂಪಣ್ಣ ಹಾಗೂ ಆತನ ನಾಲ್ವರು ಸ್ನೇಹಿತರು ಮಂಗಳವಾರ ರಾತ್ರಿ ಮದ್ಯದ ಪಾರ್ಟಿ ಮಾಡಿದ್ದರು. ಈ ವೇಳೆ ಪರಸ್ಪರರ ನಡುವೆ ಜಗಳ ನಡೆದಿತ್ತು. ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿತ್ತು. ಕುಪಿತಗೊಂಡ ಸ್ನೇಹಿತರು ಕೆಂಪಣ್ಣನ ತಲೆ ಮೇಲೆ ಮಾರ್ಬಲ್ ಕಲ್ಲು ಎತ್ತಿಹಾಕಿದ್ದರು. ಆರೋಪಿಗಳು ತಲೆಮರೆಸಿಕೊಂಡಿದ್ದು ಅವರ ಪತ್ತೆಗೆ ವಿಶೇಷ ತಂಡ ರಚಿಸಲಾಗಿದೆ’ ಎಂದು ತಿಳಿಸಿದ್ದಾರೆ.