‘ರಸ್ತೆ ಪಕ್ಕದಲ್ಲಿ ಬೈಕ್ ನಿಲ್ಲಿಸಿದ್ದ ತಂದೆ– ಮಗ, ಸಮೀಪದಲ್ಲಿದ್ದ ಮರದ ಕೆಳಗೆ ನಿಂತುಕೊಂಡಿದ್ದರು. ಇದೇ ಸಂದರ್ಭದಲ್ಲೇ ಸಿಡಿಲು ಬಡಿದು ತಿಪ್ಪೇಸ್ವಾಮಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ಚಿದಾನಂದ ಅವರನ್ನು ಗಸ್ತು ವಾಹನದ ಸಿಬ್ಬಂದಿ ಆಸ್ಪತ್ರೆಗೆ ಸೇರಿಸಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.