ಈ ಹಿಂದೆ ಎಸ್.ಎಂ.ಕೃಷ್ಣ ಅವರು ಕಾವೇರಿ ನೀರಿಗಾಗಿ ಪಾದಯಾತ್ರೆ ಮಾಡಿದರು. ಆದರೆ, ನ್ಯಾಯಾಲಯ ಛೀಮಾರಿ ಹಾಕಿತು. ಇಂತಹ ಹೋರಾಟಗಳ ಮೂಲಕ ನ್ಯಾಯಾಲಯದ ಮೇಲೆ ಪ್ರಭಾವ ಬೀರಲು ಅಥವಾ ಒತ್ತಡ ಹಾಕಲು ಸಾಧ್ಯವಿಲ್ಲ. ಮೇಕೆದಾಟಿನ ವಿಚಾರದಲ್ಲೂ ಎಷ್ಟು ಹೋರಾಟ ಮಾಡುತ್ತಾರೊ ಅಷ್ಟು ತಮಿಳುನಾಡಿನ ಪಾಲಿಗೆ ವರವಾಗಲಿದೆ. ಮೇಕೆದಾಟು ನೀರಿನಿಂದ ಕೃಷಿ ಮತ್ತು ಕುಡಿಯುವ ಉದ್ದೇಶಕ್ಕೆ ಬಳಸುತ್ತೇವೆ ಎಂದೂ ಹೇಳಿದ್ದಾರೆ. ಈ ಎಲ್ಲ ಮಾತುಗಳೂ ಕೂಡ ರೆಕಾರ್ಡ್ ಆಗಿವೆ. ತಮಿಳುನಾಡು ಇದನ್ನೇ ಅಸ್ತ್ರ ಮಾಡಿಕೊಂಡು ನ್ಯಾಯಾಲಯದಲ್ಲಿ ಬಳಸುತ್ತದೆ ಎಂದು ಅಭಿಪ್ರಾಯಪಟ್ಟರು.