‘ಜೆಡಿಎಸ್ನಲ್ಲಿ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಮಾಡಿಲ್ಲ ಎಂದು ಜಮೀರ್ ಹೇಳುತ್ತಿದ್ದಾರೆ. ಕಾಂಗ್ರೆಸ್ನಲ್ಲಿ ಜಮೀರ್ ಅವರನ್ನೇ ಮುಖ್ಯಮಂತ್ರಿ ಎಂದು ಆ ಪಕ್ಷದ ನಾಯಕರು ಘೋಷಣೆ ಮಾಡಿದರೆ ನಮ್ಮ ಆಕ್ಷೇಪವೇನೂ ಇಲ್ಲ. ಬೇರೆಲ್ಲಾ ಅಲ್ಪಸಂಖ್ಯಾತ ನಾಯಕರನ್ನು ಮುಗಿಸಿದಂತೆ ಜಮೀರ್ ಅವರನ್ನು ಕಾಂಗ್ರೆಸ್ನವರು ಮುಗಿಸುತ್ತಾರೆ ಎಂಬ ಆತಂಕವಿದೆ. ಮರಳಿ ಜೆಡಿಎಸ್ಗೆ ಬರುವುದಾದರೆ ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.