ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ನೀಡಿದ್ದ ಹೇಳಿಕೆ ಕುರಿತು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಜಫ್ರುಲ್ಲಾ, ‘ಕುಮಾರಸ್ವಾಮಿ ಒಂದು ಸಂದರ್ಭದಲ್ಲಿ ದಾರಿ ತಪ್ಪಲು ಇವರೇ ಕಾರಣ. ಬಿಜೆಪಿ ಜತೆ ಸೇರಿ ಸರ್ಕಾರ ಮಾಡಿದಾಗ ಮುತ್ತು ಕೊಟ್ಟು ಸಂಭ್ರಮಿಸಿದ್ದು ಯಾರು’ ಎಂದು ಹೆಸರನ್ನು ಉಲ್ಲೇಖಿಸದೇ ಪ್ರಶ್ನಿಸಿದರು.