ನಗರ, ಪಟ್ಟಣ ಪ್ರದೇಶಗಲ್ಲಿ ಆಸ್ಪತ್ರೆ, ಔಷಧಿಗಳು ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಬಿಟ್ಟು ಉಳಿದ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದವು. ಕೆಲವು ಹೋಟೆಲ್ಗಳು ತೆರೆದು ಪಾರ್ಸೆಲ್ ಸೌಲಭ್ಯ ನೀಡಿದವು. ದೇವಸ್ಥಾನಗಳೆಲ್ಲ ಮುಚ್ಚಿದ್ದವು. ಬೆರಳೆಣಿಕೆಯ ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿದ್ದವು. ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಿತ್ತು. ಜನರು, ವಾಹನಗಳ ಓಡಾಟವೂ ವಿರಳವಾಗಿತ್ತು. ಭಾನುವಾರವಾಗಿದ್ದರಿಂದ ಜನರು ಮನೆಯಿಂದ ಹೊರಗಡೆ ಬರಲಿಲ್ಲ.