ಈ ಸುದ್ದಿಯಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿ ಗಳು, ಕುರಿ ಮತ್ತು ಉಣ್ಣೆ ಉತ್ಪಾದನಾ ಮತ್ತು ಮಾರುಕಟ್ಟೆ ಮಂಡಳಿಯ ನಿರ್ದೇಶಕರು ಹಾಗೂ ಸ್ಥಳೀಯ ಪೊಲೀಸರು ಎಚ್ವೆತ್ತುಕೊಂಡಿದ್ದಾರೆ. ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಈ ಹಿಂದೆ ನಿರ್ಮಾಣ ಮಾಡಲಾಗಿದ್ದ ಕುರಿ ಮತ್ತು ಮೇಕೆ ಸಂತೆ ಪ್ರಾಂಗಣದಲ್ಲಿ ವೈಜ್ಞಾನಿಕ ವಿಧಾನದಲ್ಲಿ ಸಂತೆ ಪ್ರಕ್ರಿಯೆ ನಡೆಸಲು ಮುಂದಾಗಿದ್ದಾರೆ.