ರೈತರಿಗೆ ನೀರು ತಂದುಕೊಟ್ಟ ಆತ್ಮತೃಪ್ತಿ ನನಗೆ ಇದೆ. ಎಚ್.ಎನ್.ವ್ಯಾಲಿ, ಕೆ.ಸಿ.ವ್ಯಾಲಿ ತಕ್ಷಣಕ್ಕೆ ರೂಪಿಸಿರುವ ಯೋಜನೆ. ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಬೇಕು. ಸಿಹಿ ನೀರು ನೀಡಬೇಕು ಎನ್ನುವುದು ನನ್ನ ಉದ್ದೇಶ. ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದರು.