ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭಾನುವಾರ ‘ಮಂಗಳೂರು ದಸರಾ’ ಉದ್ಘಾಟನೆಗಾಗಿ ಬಂದಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರನ್ನು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿಯಾದರು.
ಈ ಸಂದರ್ಭ ಸಚಿವರು ಮೊಣಕಾಲೂರಿ ಜನಾರ್ದನ ಪೂಜಾರಿ ಅವರಿಗೆ ನಮಸ್ಕರಿಸಿ, ಆತ್ಮೀಯವಾಗಿ ಮಾತುಕತೆ ನಡೆಸಿದ ಭಾವನಾತ್ಮಕ ಸನ್ನಿವೇಶದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಜೊತೆಯಲ್ಲಿದ್ದ ಸಚಿವ ಕೋಟ ಪುತ್ರಿ ಸಹ ಜನಾರ್ದನ ಪೂಜಾರಿಗೆ ಕಾಲಿಗೆ ನಮಸ್ಕರಿಸಿ ಗೌರವ ತೋರಿದ್ದಾರೆ.
ಈ ಸಂದರ್ಭ ಜನಾರ್ದನ ಪೂಜಾರಿಯವರು ಕೋಟ ಅವರಿ ಮತ್ತು ಅವರ ಮಗಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮೊಣಕಾಲೂರಿ ಜನಾರ್ದನ ಪೂಜಾರಿ ಅವರಿಗೆ ನಮಸ್ಕರಿಸಿ, ಆತ್ಮೀಯವಾಗಿ ಮಾತುಕತೆ ನಡೆಸಿದ ಭಾವನಾತ್ಮಕ ಸನ್ನಿವೇಶದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.