×
ADVERTISEMENT
ಈ ಕ್ಷಣ :
ADVERTISEMENT

test a22m ರೋಡ್ ಶೋದಲ್ಲಿ ಚಿತ್ರ ನೀಡಿದ್ದ ಕಲಾವಿದಗೆ ಮೋದಿ ಪತ್ರ

sub
Published 22 ಏಪ್ರಿಲ್ 2024, 7:20 IST
Last Updated 22 ಏಪ್ರಿಲ್ 2024, 7:20 IST
Comments
ಅಕ್ಷರ ಗಾತ್ರ
ADVERTISEMENT

ಪ್ರಜಾವಾಣಿ ವಾರ್ತೆ

ಮಂಗಳೂರು: ತೈಲವರ್ಣದಲ್ಲಿ ರಚಿಸಿದ ವ್ಯಕ್ತಿಚಿತ್ರವನ್ನು ರೋಡ್‌ ಶೋದಲ್ಲಿ ಕಾಣಿಕೆಯಾಗಿ ನೀಡಿದ್ದ ಕಲಾವಿದ ಕಿರಣ್ ತೊಕ್ಕೊಟ್ಟು ಅವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಚೇರಿಯಿಂದ ಇ ಮೇಲ್‌ ಮೂಲಕ ಅಭಿನಂದನಾ ಪತ್ರ ಬಂದಿದೆ.

ಕಳೆದ ಭಾನುವಾರ ಮಂಗಳೂರಿನಲ್ಲಿ ನಡೆದ ರೋಡ್‌ ಷೋದಲ್ಲಿ ಮೋದಿ ಅವರ ತೈಲವರ್ಣದ ಚಿತ್ರವನ್ನು ಹಿಡಿದುಕೊಂಡು ರಸ್ತೆಬದಿಯಲ್ಲಿ ನಿಂತಿದ್ದ ಕಿರಣ್ ಅವರಿಂದ ಭದ್ರತಾ ಸಿಬ್ಬಂದಿ ಮೂಲಕ ಮೋದಿ ಅವರು ಚಿತ್ರ ಪಡೆದುಕೊಂಡಿದ್ದರು. ಬುಧವಾರ ಸಂಜೆ ಪ್ರಧಾನಿ ಕಚೇರಿಯಿಂದ ಕರೆ ಮಾಡಿ ಇ ಮೇಲ್ ಐಡಿ ಮತ್ತು ವಿಳಾಸ ಪಡೆದುಕೊಂಡು ಮೇಲ್ ಕಳುಹಿಸಲಾಗಿದೆ. ಮೋದಿ ಅವರ ಸಹಿ ಇರುವ ಪತ್ರದಲ್ಲಿ ಕಿರಣ್ ಅವರ ಪ್ರತಿಭೆಯನ್ನು ಅಭಿನಂದಿಸಲಾಗಿದೆ.

‘ಅತ್ಯುತ್ತಮ ಕೌಶಲದಿಂದ ತಾವು ರಚಿಸಿದ ಚಿತ್ರವು ದೇಶದ ಯುವಶಕ್ತಿ ಯನ್ನು ಪ್ರತಿಬಿಂಬಿಸುತ್ತಿದೆ. ಪ್ರಗತಿಪರ ಭಾರತವನ್ನು ನಿರ್ಮಿಸಲು ಮತ್ತು ಯುವಜನರಿಗೆ ಪ್ರಗತಿಪರ ಭವಿಷ್ಯವನ್ನು ನೀಡಲು ಪ್ರಯತ್ನ ನಡೆಯುತ್ತಿರುವ ಈ ಸಂದರ್ಭದಲ್ಲಿ ನಿಮ್ಮ ಅಭಿಮಾನದ ಕಾಣಿಕೆಯು ನನ್ನ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ದೇಶಕ್ಕಾಗಿ ಇನ್ನಷ್ಟು ಹೆಚ್ಚು ಶ್ರಮದಿಂದ ಸೇವೆ ಸಲ್ಲಿಸಲು ನಾನು ಬದ್ಧನಾಗಿದ್ದೇನೆ’ ಎಂದು ಮೋದಿ ಪತ್ರದಲ್ಲಿ ಹೇಳಿದ್ದಾರೆ.

‘ನಾನು ಚಿತ್ರದ ಹಿಂದೆ ಸಂಪರ್ಕ ಸಂಖ್ಯೆ ಮತ್ತು ವಿಳಾಸ ಬರೆದಿದ್ದೆ. ನವದೆಹಲಿಯಿಂದ ಕರೆ ಮಾಡಿದ ಅಧಿಕಾರಿಗಳು ನನ್ನೊಂದಿಗೆ ಮಾತನಾಡಿ ನಿಮ್ಮ ಚಿತ್ರದ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು. ರೋಡ್ ಶೋದ ಜನಜಂಗುಳಿಯಲ್ಲಿ ಕೊಟ್ಟ ಚಿತ್ರವನ್ನು ಪ್ರಧಾನಿಯೊಬ್ಬರು ಜೋಪಾನವಾಗಿ ತೆಗೆದುಕೊಂಡು ಹೋಗುವುದು ಮತ್ತು ಪತ್ರದ ಮೂಲಕ ಅಭಿನಂದನೆ ಸಲ್ಲಿಸುವುದು ಅಚ್ಚರಿಯ ವಿಷಯ’ ಎಂದು ಕಿರಣ್ ಹೇಳಿದರು.

Quote -

ಚುನಾವಣೆ ಪ್ರಚಾರದ ನಡುವೆಯೂ ಸಮಯ ಹೊಂದಿಸಿ ಅಪರಿಚಿತ ನೀಡಿದ ಚಿತ್ರದ ಬಗ್ಗೆ ಕಾಳಜಿ ವಹಿಸಿ ಪತ್ರವನ್ನು ಬರೆದು ಪ್ರೋತ್ಸಾಹಿಸುವುದು ಎಂದರೆ ನಂಬಲು ಸಾಧ್ಯವಾಗದ ವಿಷಯ ಇದು ಧನ್ಯತೆಯ ಸಮಯ

ಕಿರಣ್‌ ತೊಕ್ಕೊಟ್ಟು ಕಲಾವಿದ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT