‘ಕಾಂಗ್ರೆಸ್, ಜೆಡಿಎಸ್ನಿಂದ ಬಂದವರಿಂದ ನಾವು ಸರ್ಕಾರ ರಚನೆ ಮಾಡಿದ್ದು, ಪದೇ ಪದೇ ಅವರೇ ಸಚಿವರಾಗುತ್ತಿದ್ದಾರೆ. ಹೊಸಮುಖಗಳಿಗೆ ಅವಕಾಶ ನೀಡಿ ಎಂದು ಕೇಳಿದ್ದೇನೆ. ಮೂರು ಅವಧಿಯಲ್ಲಿ ಸಚಿವರಾಗಿದ್ದವರಿಗೆ ಮತ್ತೆ ಮಣೆಹಾಕಿದ್ದು, ಅವರು ರಾಜಿನಾಮೆ ನೀಡಿ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಳ್ಳಬೇಕು. ನಾನು ರೆಸಾರ್ಟ್, ನಾಲ್ಕು ಗೋಡೆಗಳ ಮಧ್ಯೆ ಮಾತನಾಡುವುದಿಲ್ಲ. ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡುವ ಕೆಲಸ ಮಾಡುತ್ತೇವೆ’ ಎಂದು ಹೇಳಿದರು.