ಅವರು ಗದುಗಿನಲ್ಲಿ ಭಾನುವಾರ ಮಾಧ್ಯಮದವರ ಜತೆಗೆ ಮಾತನಾಡಿ, ‘ಕೆಲವು ಕಡೆಗಳಲ್ಲಿ ಇಡೀ ಲಂಬಾಣಿ ತಾಂಡಾಗಳನ್ನೇ ಮತಾಂತರ ಮಾಡಿದ ಉದಾಹರಣೆಗಳಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಇಂತಹ ಅಪಾಯದ ಸ್ಥಿತಿಯನ್ನು ಅರಿತೇ ಆರ್ಎಸ್ಎಸ್ ಪ್ರಮುಖ ಮೋಹನ ಭಾಗವತ್ ಸಹ ಉಲ್ಲೇಖ ಮಾಡಿದ್ದಾರೆ. ಹೀಗಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುವ ಅವಶ್ಯಕತೆ ಇದೆ’ ಎಂದು ಅವರು ಹೇಳಿದರು.