‘ಅನ್ನ, ಅಕ್ಷರ ಹಾಗೂ ಆಶ್ರಯದ ಮೂಲಕ ತ್ರಿವಿಧ ದಾಸೋಹದ ಪರಿಕಲ್ಪನೆಯನ್ನು ಸಾಕಾರಗೊಳಿಸಿ; ಜಾತಿ, ಧರ್ಮ, ಭಾಷೆ, ಪ್ರಾಂತ್ಯ, ಲಿಂಗಬೇಧವಿಲ್ಲದೆ 111 ವರ್ಷಗಳ ತಮ್ಮ ತುಂಬು ಜೀವನದಲ್ಲಿ 80 ವರ್ಷಗಳ ಕಾಲ ತ್ರಿವಿಧ ದಾಸೋಹದ ಕೈಂಕರ್ಯದಲ್ಲಿ ನಿರತರಾಗಿದ್ದ ಸಿದ್ಧಗಂಗಾಶ್ರೀ ಪುಣ್ಯ ಸ್ಮರಣೆ ದಿನವಾದ ಜನವರಿ 21ರಂದು ‘ದಾಸೋಹ ದಿನಾಚರಣೆ’ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಇದೇ ಪ್ರಥಮಬಾರಿಗೆ ಮೊದಲ ದಾಸೋಹ ದಿನಾಚರಣೆಯನ್ನು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲಾಗಿದೆ’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಎನ್.ತಿಪ್ಪೇಸ್ವಾಮಿ ತಿಳಿಸಿದರು.