ಕಾರ್ಯಕ್ರಮದಲ್ಲಿ ಹತ್ಯಾಳದ ಜಾಗತಿಕ ಮೈತ್ರೀ ಬೌದ್ಧ ಮಹಾಸಭಾದ ಧಮ್ಮನಾಗ ಬಂತೇ, ಯಡ್ರಾಮಿ ವಿರಕ್ತ ಮಠದ ಸಿದ್ದಲಿಂಗ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಚಿಗರಹಳ್ಳಿ ಮುರುಳಶಂಕರ ಗುರುಪೀಠದ ಸಿದ್ಧಬಸವ ಕಬೀರ ಸ್ವಾಮೀಜಿ ಸಾನ್ನಿಧ್ಯ ವಹಿಸುವವರು.
ಶಾಸಕ ಡಾ ಅಜಯಸಿಂಗ್ ಕಾರ್ಯಕ್ರಮ ಉದ್ಘಾಟನೆ ಮಾಡುವರು. ಭಾರತೀಯ ಬೌದ್ಧ ಮಹಾಸಭಾ ಕಾರ್ಯಾಧ್ಯಕ್ಷ, ಡಾ ಅಂಬೇಡ್ಕರ್ ಅವರ ಮೊಮ್ಮಗ ಭೀಮರಾವ ಅಂಬೇಡ್ಕರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಬೋಳ, ಶಿವರಾಜ ಪಾಟೀಲ ರದ್ದೇವಾಡಗಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಮುಖ್ಯ ಭಾಷಣಕಾರರಾಗಿ ನಟ ಚೇತನ್ ಅಹಿಂಸಾ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ರಾಜಾಧ್ಯಕ್ಷ ಶ್ರೀನಾಥ ಪೂಜಾರಿ ಮಾತನಾಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.