×
ADVERTISEMENT
ಈ ಕ್ಷಣ :
ADVERTISEMENT

ಗಡಿಕೇಶ್ವಾರ: ವಿಜ್ಞಾನಿಗಳ ಸಮ್ಮುಖದಲ್ಲಿಯೇ ಭೂಕಂಪನ ದಾಖಲು

ಫಾಲೋ ಮಾಡಿ
Comments
ADVERTISEMENT
""

ಚಿಂಚೋಳಿ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ವಿಜ್ಞಾನಿಗಳ ಸಮ್ಮುಖದಲ್ಲಿಯೇ ಭೂಕಂಪನ ದಾಖಲಾಯಿತು.

ಭಾನುವಾರ ಹೈದರಾಬಾದ್‌ನ ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ. ಶಶಿಧರ, ಡಾ. ಸುರೇಶ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ಉಸ್ತುವಾರಿ ಕೋಶದ ಭೂಕಂಪ ವಿಜ್ಞಾನಿಗಳಾದ ಡಾ. ರಮೇಶ ದಿಕ್ಪಾಲ್, ಡಾ. ಅಭಿನಯ ಹಾಗೂ ಕಲಬುರಗಿಯ ಶರಣ ಶಿರಸಗಿಯ ಭೂಕಂಪ ಮಾಪನ ಕೇಂದ್ರದ ಸಹಾಯಕ ವಿಜ್ಞಾನಿ ಅಣವೀರಪ್ಪ ಬಿರಾದಾರ ಹಾಗೂ ತಹಶೀಲ್ದಾರ ಅಂಜುಮ್ ತಬಸ್ಸುಮ್, ಜಿಲ್ಲಾ ವಿಪತ್ತು ನಿರ್ವಹಣಾಧಿಕಾರಿ ಉಮೇಶ ಬಿರಾದಾರ, ವಿಜಯಪುರದ ರಾಕೇಶ, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ರಿಯಾಜ್ ಮತ್ತು ವಿಜಯಪುರ ಜಿಲ್ಲೆಯ ಕೊಲ್ಹಾರ ತಹಶೀಲ್ದಾರ್ ಅವರು ಇದ್ದಾಗಲೇ ಭೂಮಿಯಿಂದ ಸದ್ದು ಕೇಳಿ ಬಂದಿತು.‌

ಗಡಿಕೇಶ್ವಾರ ಗ್ರಾಮದಲ್ಲಿ ‌ಸಿಸ್ಮೊಮೀಟರ್ ಅಳವಡಿಸಿರುವುದು

ಅದೇ ಕ್ಷಣ ಗ್ರಾಮದ ಗ್ರಾ.ಪಂ. ಕಟ್ಟಡದಲ್ಲಿ ಹೈದರಾಬಾದನ ರಾಷ್ಟ್ರೀಯ ಭೌಗೋಳಿಕ ಸಂಶೋಧನಾ ಸಂಸ್ಥೆಯ ವತಿಯಿಂದ ಸಿಸ್ಮೊ ಮೀಟರ್ ಅಳವಡಿಸಲಾಗಿತ್ತು. ಅದರಲ್ಲಿ ಲಘು ಕಂಪನದ ದಾಖಲಾಗಿದೆ. ಇದರ ತೀವ್ರತೆ ಒಂದಕ್ಕಿಂತ ಕಡಿಮೆ ಎಂದು ವಿಜ್ಞಾನಿ ಡಾ. ಶಶಿಧರ ತಿಳಿಸಿದರು.

ಚಿಂಚೋಳಿ ತಾಲ್ಲೂಕಿನ ಭೂಕಂಪ ಪೀಡಿತ ಗಡಿಕೇಶ್ವಾರ ಗ್ರಾಮದಲ್ಲಿ ವಿಜ್ಞಾನಿಗಳ ಸಮ್ಮುಖದಲ್ಲಿಯೇ ಭೂಕಂಪನ ದಾಖಲಾಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT