ಪಾದಯಾತ್ರೆಯ ಬಂದೋಬಸ್ತ್ ಕರ್ತವ್ಯ ಪೂರ್ಣಗೊಳಿಸಿ ಜಿಲ್ಲೆಗೆ ಮರಳಿದ ನಂತರ ಸಿಬ್ಬಂದಿಯಲ್ಲಿ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಕೋವಿಡ್ ಪರೀಕ್ಷೆ ಮಾಡಿದಾಗ ಸೋಂಕು ಹರಡಿರುವುದು ದೃಢಪಟ್ಟಿದೆ. ಸೋಂಕಿತ ಸಿಬ್ಬಂದಿ ಮನೆಗಳಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದು, ಕುಟುಂಬ ಸದಸ್ಯರಲ್ಲಿ ಆತಂಕ ಮನೆ ಮಾಡಿದೆ.