ಮುಂಗಾರು ಸಮಯದಲ್ಲಿ ಮುನಿಸಿಕೊಂಡಿದ್ದ ಮಳೆರಾಯ ಮೂರು ದಿನಗಳಿಂದ ಬಿಡುವು ನೀಡದೆ ಸುರಿಯುತ್ತಿರುವುದರಿಂದ ಕಪ್ಪಲೆಪ್ಪ ಜಲಪಾತಕ್ಕೆ ಜೀವ ಕಳೆ ತುಂಬಿ ಬರುತ್ತಿದೆ. ಕೊಪ್ಪಳ ಸೇರಿದಂತೆ ವಿಜಯಪುರ, ಬಾಗಲಕೋಟೆ, ಗದಗ, ಬಳ್ಳಾರಿ ಜಿಲ್ಲೆಗಳ ಜನರು ಜಲಪಾತದ ಸೌಂದರ್ಯ ಕಣ್ಣು ತುಂಬಿಕೊಳ್ಳಲು ಬರುತ್ತಿದ್ದಾರೆ. ಈ ಭಾಗದಲ್ಲಿ ಜಲಪಾತಗಳ ಸಂಖ್ಯೆ ಕಡಿಮೆ. ಕಪ್ಪಲೆಪ್ಪ, ಕಪೀಲತೀರ್ಥ, ಕಬ್ಬರಗಿ ದಿಡಗ ಎಂದೆಲ್ಲ ಈ ಜಲಪಾತಕ್ಕೆ ಹೆಸರಿದೆ.