ಜಿಲ್ಲೆಯ ಎಲ್ಲ ಭಾಗಗಳಲ್ಲಿ ಮಳೆ ನಿಂತಿದ್ದು, ಚಳಿಗಾಲ ಪ್ರಾರಂಭವಾಗಿದೆ. ಒಂದು ತಿಂಗಳಿಗೂ ಹೆಚ್ಚು ಕಾಲದಿಂದ ರೈತರು ಬೆಳೆದಿರುವ ಕಬ್ಬು ಮತ್ತು ಇತರ ಬೆಳೆಗಳು ನೀರಿನ ಕೊರತೆಯಿಂದಾಗಿ ಒಣಗುತ್ತಿವೆ. ತಕ್ಷಣ ಕೆ.ಆರ್.ಎಸ್. ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಿದರೆ ಒಣಗುತ್ತಿರುವ ಬೆಳೆಗಳನ್ನು ಉಳಿಸಿಕೊಳ್ಳಲು ರೈತರಿಗೆ ಅನುಕೂಲವಾಗಲಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.