‘ಪೊಲೀಸರು ನಮ್ಮ ಹೋರಾಟವನ್ನು ಹತ್ತಿಕ್ಕುತ್ತಿದ್ದಾರೆ. ನಾವು ನ್ಯಾಯ ಕೇಳಲು ಬಂದಿದ್ದೇವೆಯೇ ಹೊರತು ಗುಂಪು ಕಟ್ಟಿಕೊಂಡು ಜಗಳ ಮಾಡಲು ಬಂದಿರಲಿಲ್ಲ. ರಾಜ್ಯದಲ್ಲಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು ಸೇರಿದಂತೆ ಹಲವು ರಾಜಕಾರಣಿಗಳು ಜನರನ್ನು ಸೇರಿಸಿಕೊಂಡು ಸಭೆ, ಸಮಾರಂಭ, ಹೋರಾಟ ಮಾಡುತ್ತಿದ್ದಾರೆ. ಆದರೆ, ಇಲ್ಲಿ ಕೋವಿಡ್ ಕಾರಣ ನೀಡಿ ನಮ್ಮನ್ನು ಬಂಧಿಸಿರುವುದು ಸರಿಯಾದ ಕ್ರಮವಲ್ಲ. ಇಲ್ಲಿನ ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಮತ್ತು ಕಂದಾಯ ಇಲಾಖೆ ಸಿಬ್ಬಂದಿಯ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ನಿಲ್ಲುವುದಿಲ್ಲ’ ಎಂದು ಹೇಳಿದರು.