ಸ್ವಾಮೀಜಿ ಅವರಿಗೆ ಜಾಮೀನು ನೀಡುವಂತೆ ಪಟ್ಟಣದ ವಕೀಲರಾದ ಎಸ್.ಆರ್.ಸಿದ್ದೇಶ್, ಟಿ.ಬಾಲರಾಜು ಮತ್ತು ಎ.ಟಿ.ಜಯಕುಮಾರ್ ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಿದ್ದರು. ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸ್ವಾಮೀಜಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ಜಾಮೀನು ನೀಡುವ ಆದೇಶವನ್ನು ಬುಧವಾರಕ್ಕೆ ಕಾಯ್ದಿರಿಸಿತ್ತು.