ಕೋವಿಡ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಅವರು, ಅಂಬಾಮಠ ಜಾತ್ರೆಯನ್ನು ರದ್ದುಗೊಳಿಸಿ ಆದೇಶ ಹೊರಡಿಸಿದ್ದರು. ಆದರೂ ಸೋಮವಾರ ಬೆಳಗಿನ ಜಾವ ಸಾಂಕೇತಿಕವಾಗಿ ಶ್ರೀದೇವಿಯ ಮೂರ್ತಿಗೆ ವಿಶೇಷ ಪೂಜೆ, ಕುಂಕುಮಾರ್ಚನೆ, ಬಿಲ್ವಾರ್ಚನೆ, ರುದ್ರಾಭಿಷೇಕ, ಪಂಚಾಮೃತ ಅಭಿಷೇಕ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಜರುಗಿದವು.