ಮಾನ್ವಿ: ಪಟ್ಟಣದ ಶ್ರೀರಾಮಲಿಂಗ ಚೌಡೇಶ್ವರಿ ದೇವಿಯ ಜಾತ್ರೆಯ ಪ್ರಯುಕ್ತ ಬುಧವಾರ ರಥೋತ್ಸವ ನಡೆಯಿತು.
ಕೋವಿಡ್ ಮಾರ್ಗಸೂಚಿ ಅನ್ವಯ ದೇವಸ್ಥಾನದಲ್ಲಿ ಭಕ್ತರಿಗೆ ಚೌಡೇಶ್ವರಿ ದೇವಿಯ ದರ್ಶನ ಹಾಗೂ ಪೂಜೆಗೆ ಅವಕಾಶ ಕಲ್ಪಿಸಲಾಗಿತ್ತು. ಬೆಳಿಗ್ಗೆ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ನಿಯಮ ಉಲ್ಲಂಘನೆ:ರಥೋತ್ಸವದಲ್ಲಿ ನಂದಿಕೋಲು ಕುಣಿತ ಸೇರಿದಂತೆ ವಿವಿಧ ವಾದ್ಯ ಮೇಳಗಳು ಭಾಗವಹಿಸಿದ್ದವು. ಸಾಕಷ್ಟು ಸಂಖ್ಯೆಯಲ್ಲಿ ಭಕ್ತರೂ ಭಾಗವಹಿಸಿದ್ದರು. ಈ ವೇಳೆ ಯಾರೂ ಕೋವಿಡ್ ನಿಯಮಗಳನ್ನು ಪಾಲಿಸಿರಲಿಲ್ಲ.
ಕಲ್ಮಠದ ವಿರೂಪಾಕ್ಷ ಪಂಡಿತಾರಾಧ್ಯ ಸ್ವಾಮೀಜಿ, ಪುರಸಭೆಯ ಸದಸ್ಯ ರಾಜಾ ಮಹೇಂದ್ರನಾಯಕ, ಎಇ.ಬಿ.ಉಪ್ಪಳಮಠ, ಗುಮ್ಮಾ ಬಸವರಾಜ, ರಾಜಾ ರಾಮಚಂದ್ರನಾಯಕ, ಜಿ.ಶಿವಕುಮಾರ ಮತ್ತಿತರ ಪ್ರಮುಖರು ಭಾಗವಹಿಸಿದ್ದರು.
ಮಾನ್ವಿ: ಪಟ್ಟಣದ ಶ್ರೀರಾಮಲಿಂಗ ಚೌಡೇಶ್ವರಿ ದೇವಿಯ ಜಾತ್ರೆಯ ಪ್ರಯುಕ್ತ ಬುಧವಾರ ರಥೋತ್ಸವ ನಡೆಯಿತು.