ಮನಗೂಳಿಯವರು ಡಿ.ಕೆ.ಶಿವಕುಮಾರ್ ಹತ್ತಿರ ಹೋಗಿರಲಿಲ್ಲ. ಅವರೇ ಮನಗೂಳಿ ಬಳಿ ಹೋಗಿದ್ದರು ಎಂದು ಕುಮಾರಸ್ವಾಮಿ ಪುನರುಚ್ಛರಿಸಿದರು. ‘ಇದೇ 16 ರಿಂದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದೇನೆ. ಕಾಂಗ್ರೆಸ್ ಸೋಲಿಸಲು ಮುಸ್ಲಿಂ ಅಭ್ಯರ್ಥಿ ಹಾಕಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದರು. ಆದರೆ ಮೊನ್ನೆ ಪ್ರಚಾರದ ವೇಳೆ ಜನರೇ ಅಭ್ಯರ್ಥಿಗೆ ₹50 ಸಾವಿರ ಹಣವನ್ನು ಚುನಾವಣಾ ಖರ್ಚಿಗೆ ನೀಡಿದ್ದಾರೆ.