ಸದ್ಯ ಅವರು ಮನೆಯಲ್ಲಿ ಪ್ರತ್ಯೇಕ ವಾಸಕ್ಕೆ ಒಳಗಾಗಿದ್ದು, ಆರೋಗ್ಯದಿಂದ ಇದ್ದಾರೆ. ಬಾಲಕೃಷ್ಣ ಇದೇ ತಿಂಗಳ 9ರಿಂದ 13ರವರೆಗೆ ರಾಮನಗರ ಜಿಲ್ಲೆಯಲ್ಲಿ ನಡೆದ ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಕಳೆದ ಮೂರ್ನಾಲ್ಕು ದಿನದಿಂದ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಅವರು ಮನವಿ ಮಾಡಿದ್ದಾರೆ.