ರಾಮನಗರದಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರೈಲು ನಿಲ್ದಾಣ ಪೂರ್ತಿ ಜಲಾವೃತಗೊಂಡಿದ್ದು, ಮೈಸೂರು- ಬೆಂಗಳೂರು ನಡುವೆ ರೈಲುಗಳ ಸಂಚಾರ ಸ್ಥಗಿತಗೊಂಡಿದೆ. ಸಂಗನಬಸವನದೊಡ್ಡಿ ಬಳಿ ಹೆದ್ದಾರಿಯ ಅಂಡರ್ ಪಾಸ್ ನಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿದ್ದು, ಬಸ್ ಹಾಗೂ ಕಾರುಗಳು ಮುಳುಗಿವೆ.