ಪಟ್ಟಣದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಜನರು ಗುಂಪುಗೂಡಿದ್ದರು. ಮಾಸ್ಕ್ ಧರಿಸುವವರ ಸಂಖ್ಯೆ ತೀರಾ ಕಡಿಮೆ. ಗುಂಪು ಗುಂಪಾಗಿ ಸೇರುವುದು ಹೆಚ್ಚುತ್ತಿದೆ. ಸಂತೆ, ಉತ್ಸವಗಳು, ದೇವಾಲಯಗಳಿಗೆ ಭೇಟಿ ನೀಡುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊರೊನಾ ಕಂಟಕದ ನಡುವೆ ಸುಗ್ಗನಹಳ್ಳಿ ಲಕ್ಷ್ಮೀನರಸಿಂಹಸ್ವಾಮಿ, ತಿರುಮಲೆ ರಂಗನಾಥಸ್ವಾಮಿ ಸೇರಿದಂತೆ ಇತರೆ ದೇವಾಲಯಗಳಲ್ಲಿ ಭಕ್ತರ ದಂಡೇ ಹರಿದು ಬರುತ್ತಿದೆ. ಕೊರೊನಾ ಕೈಮೀರಿ ಹೋಗುವ ಮುನ್ನ ಸಾರ್ವಜನಿಕರು ಎಚ್ಚರಿಕೆವಹಿಸಬೇಕು ಎಂಬುದು ವೈದ್ಯರ ಸಲಹೆ.