×
ADVERTISEMENT
ಈ ಕ್ಷಣ :
ADVERTISEMENT

ಜಡೆ: ಸಂಭ್ರಮದ ವಿಜಯ ದಶಮಿ ‌

Published : 16 ಅಕ್ಟೋಬರ್ 2021, 4:46 IST
ಫಾಲೋ ಮಾಡಿ
Comments

ಸೊರಬ: ವಿಜಯ ದಶಮಿ ಅಂಗವಾಗಿ ತಾಲ್ಲೂಕಿನ ಜಡೆ ಗ್ರಾಮದಲ್ಲಿ ಜಡೆ ಸಂಸ್ಥಾನ ಮಠದ ಸಿದ್ಧವೃಷಭೇಂದ್ರ ಸ್ವಾಮೀಜಿ ಅವರ ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ಶುಕ್ರವಾರ ಸಂಭ್ರಮದಿಂದ ನೆರವೇರಿತು.

ಜಡೆಯ ಬಸವೇಶ್ವರ ದೇವಸ್ಥಾನದ ಆವರಣದ ಬನ್ನಿ ಮಂಟಪದಲ್ಲಿ ಬನ್ನಿ ಮುಡಿಯುವ ಕಾರ್ಯಕ್ರಮ ಜರುಗಿತು.

ಆಶೀರ್ವಚನ ನೀಡಿದ ಜಡೆ ಸಂಸ್ಥಾನ ಮಠದ ಮಹಾಂತ ಸ್ವಾಮೀಜಿ, ‘ಬನ್ನಿ ಮುಡಿಯುವ ಹಬ್ಬ ಜನರ ಬದುಕಿನ ಬಾಂಧವ್ಯದ ಬೆಸುಗೆ. ಪರಿಸರ ರಕ್ಷಣೆಯ ಸಂಕೇತವಾಗಿದ್ದು, ಹಸುರಿನ ಮಹತ್ವ ಸಾರುವ ಹಬ್ಬ. ಬನ್ನಿ ಗಿಡವನ್ನು ಪರಸ್ಪರ ಹಂಚಿಕೊಳ್ಳುವ ಮೂಲಕ ರಾಗ, ದ್ವೇಷ, ಅಸೂಯೆಗಳನ್ನು ಮರೆತು ಮಾನವೀಯ ಸಂಬಂಧಗಳು ಪರಿಪಕ್ವಗೊಳ್ಳಲು ಸಹಾಯಕವಾಗುತ್ತದೆ. ಸ್ನೇಹ, ಪ್ರೀತಿ, ಬಾಂಧವ್ಯ ಉಳಿಸಿಕೊಳ್ಳುವ ಸಂದೇಶ ಸಾರುವ ಹಬ್ಬ ಇದು’ ಎಂದು ಹೇಳಿದರು.

ಜಡೆ ಯುವ ವೇದಿಕೆ ಸದಸ್ಯರು ಹಾಗೂ ಗ್ರಾಮಸ್ಥರು ಇದ್ದರು.

ಸೊರಬ: ವಿಜಯ ದಶಮಿ ಅಂಗವಾಗಿ ತಾಲ್ಲೂಕಿನ ಜಡೆ ಗ್ರಾಮದಲ್ಲಿ ಜಡೆ ಸಂಸ್ಥಾನ ಮಠದ ಸಿದ್ಧವೃಷಭೇಂದ್ರ ಸ್ವಾಮೀಜಿ ಅವರ ಉತ್ಸವ ಮೂರ್ತಿಯ ಪಲ್ಲಕ್ಕಿ ಮೆರವಣಿಗೆ ಶುಕ್ರವಾರ ಸಂಭ್ರಮದಿಂದ ನೆರವೇರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT