ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಂಗಳವಾರ ಕಾಗೋಡು ತಿಮ್ಮಪ್ಪ ಅವರಿಗೆ ಅಲ್ಪಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಅವರ ಗಂಟಲದ್ರವದ ಮಾದರಿಯನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗಾಗಿ ತೆಗೆಯಲಾಗಿತ್ತು. ಇವತ್ತಿನವರೆಗೂ ವರದಿ ಏನಾಗಿದೆ ಎಂದು ಆಸ್ಪತ್ರೆಯವರು ಮಾಹಿತಿ ನೀಡಿಲ್ಲ. ಎಪಿಎಂಸಿ ಸದಸ್ಯ ಕೆ. ಹೊಳಿಯಪ್ಪ ಅವರು ಆಸ್ಪತ್ರೆಗೆ ಹೋಗಿದ್ದಾಗ ವಿಷಯ ತಿಳಿದು ನಮ್ಮ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಮಾಜಿ ಆರೋಗ್ಯ ಸಚಿವರ ವಿಷಯದಲ್ಲೇ ಆಸ್ಪತ್ರೆಯವರು ಇಷ್ಟೊಂದು ನಿರ್ಲಕ್ಷ್ಯ ತೋರಿದರೆ ಸಾಮಾನ್ಯ ಜನರ ಗತಿಯೇನು’ ಎಂದು ಪ್ರಶ್ನಿಸಿದರು.