ತೀರ್ಥಹಳ್ಳಿ: ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.
‘ಈಗಾಗಲೇ ಹಲವು ರೋಗಗಳಿಂದ ಮಲೆನಾಡಿನ ರೈತರು ಕಂಗಾಲಾಗಿದ್ದಾರೆ. ಈಗ ಬಂದಿರುವ ರೋಗದಿಂದ ಅನೇಕ ತೋಟ ಹಾಳಾಗಿದೆ. ಎಲೆಚುಕ್ಕಿ ರೋಗ ನಿಯಂತ್ರಿಸಲು ಅಧಿಕಾರಿಗಳು ಹೆಚ್ಚಿನ ಮಾಹಿತಿ ನೀಡಬೇಕು. ರೈತರಿಗೆ ಸೂಕ್ತವಾದ ಪರಿಹಾರ ನೀಡಲು ಒತ್ತಾಯಿಸುತ್ತೇನೆ’ ಎಂದು ರೈತರಿಗೆ ಭರವಸೆ ನೀಡಿದರು.
ತಾಲ್ಲೂಕು ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೆಸ್ತೂರು ಮಂಜುನಾಥ್, ಎಪಿಎಂಸಿ ನಿರ್ದೇಶಕ ಹಸಿರುಮನೆ ಮಹಾಬಲೇಶ್, ತಾಲ್ಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹೊಸಳ್ಳಿ ಸುಧಾಕರ್, ಮುಖಂಡರಾದ ಹೊಸೂರು ಗಿರೀಶ್ ಹೆಗ್ಡೆ ಇದ್ದರು.
ಎಲೆಚುಕ್ಕಿ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದಾರೆ. ಸರ್ಕಾರ ರೋಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು. ರೈತರಿಗೆ ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ ಒತ್ತಾಯಿಸಿದರು.