×
ADVERTISEMENT
ಈ ಕ್ಷಣ :
ADVERTISEMENT

ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಬೇಡ: ಡಿ. ಕೃಷ್ಣಕುಮಾರ್

Published : 18 ಅಕ್ಟೋಬರ್ 2021, 6:42 IST
ಫಾಲೋ ಮಾಡಿ
Comments

ಕುಣಿಗಲ್: ‘ಸಹಕಾರ ಸಂಘಗಳಲ್ಲಿ ರಾಜಕೀಯದಿಂದಾಗಿ ಮೂಲ ಉದ್ದೇಶ ಮರೆಯಾಗಿ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ರಾಜಕಾರಣದಿಂದ ಸಂಘಗಳು ಅವನತಿಯ ಹಾದಿ ಹಿಡಿಯುತ್ತಿರುವ ಕಾರಣ ರಾಜಕೀಯ ರಹಿತವಾಗಿ ಬೆಳೆಯಬೇಕು’ ಎಂದು ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ. ಕೃಷ್ಣಕುಮಾರ್ ಕರೆ ನೀಡಿದರು.

ಇಲ್ಲಿನ ಟೌನ್‌ ವಿವಿಧೊದ್ದೇಶ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಭಾನುವಾರ ಉದ್ಘಾಟಿಸಿ ಅವರು ಮಾತನಾಡಿದರು.

ಈ ಸಹಕಾರ ಸಂಘ ನಿವೃತ್ತ ಶಿಕ್ಷಕ ಶ್ರೀನಿವಾಸ್ ಗೌಡ ಸೇರಿದಂತೆ ಅನೇಕ ಸಹಕಾರಿ ಧುರೀಣರ ಮಾರ್ಗದರ್ಶನದಲ್ಲಿ ನೂರು ವರ್ಷ ಪೂರೈಸಿದೆ. ಆಡಳಿತ ಮಂಡಳಿಯವರು ಆರ್ಥಿಕ ಚಟುವಟಿಕೆ ಹೆಚ್ಚಿಸಿಕೊಂಡು ಬಡ ವ್ಯಾಪಾರಿಗಳಿಗೆ ನೆರವು ನೀಡಬೇಕು. ವ್ಯಾಪಾರಿಗಳು ಸಂಘದ ಪ್ರಗತಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ. ಶಿವಣ್ಣ, ಸಂಘದ ಅಧ್ಯಕ್ಷ ಮಂಜುನಾಥ್, ಉಪಾಧ್ಯಕ್ಷ ಅನೂಪಕುಮಾರ್, ನಿರ್ದೇಶಕರಾದ ಮಹೇಶ, ವೆಂಕಟೇಶ್, ಈ. ಮಂಜು, ಆನಂದ್ ಸಿಂಗ್, ರಾಘವೇಂದ್ರ, ದಿನೇಶ್, ಎಲ್ಲೆಗೌಡ, ಸಂಪತ್, ನರ್ಮದಾ ದೇವಿ, ರೇವಮ್ಮ, ಕಾರ್ಯದರ್ಶಿ ರಾಜು ಹಾಜರಿದ್ದರು.

‘ಸಹಕಾರ ಸಂಘಗಳಲ್ಲಿ ರಾಜಕೀಯದಿಂದಾಗಿ ಮೂಲ ಉದ್ದೇಶ ಮರೆಯಾಗಿ ಅಸ್ತಿತ್ವಕ್ಕೆ ಧಕ್ಕೆಯಾಗಲಿದೆ. ರಾಜಕಾರಣದಿಂದ ಸಂಘಗಳು ಅವನತಿಯ ಹಾದಿ ಹಿಡಿಯುತ್ತಿರುವ ಕಾರಣ ರಾಜಕೀಯ ರಹಿತವಾಗಿ ಬೆಳೆಯಬೇಕು’ ಎಂದು ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ. ಕೃಷ್ಣಕುಮಾರ್ ಕರೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT