ರೋಗಿಗಳು ಹಾಗೂ ಅವರ ಅವಲಂಬಿತರು, ಸಾರ್ವಜನಿಕರಿಗಾಗಿ ಜಾಗೃತಿ ಕಾರ್ಯಕ್ರಮ ಹಾಗೂ ಮುಕ್ತ ಮಾತುಕತೆ ನಡೆಯಿತು. ಮನೋವೈದ್ಯಶಾಸ್ತ್ರ ವಿಭಾಗದ ಸಲಹೆಗಾರ ಡಾ.ಪಿ.ಎನ್.ಅಭಿರಾಮ್ ಸಾಮಾನ್ಯ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ಬಗ್ಗೆ ಹಾಗೂ ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಎ. ಜೈನ್ ಮಾನಸಿಕ ಆರೋಗ್ಯ ಅಸ್ವಸ್ಥತೆಗಳ ನಿರ್ವಹಣೆಯ ಬಗ್ಗೆ ಮಾತನಾಡಿದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಪ್ರಯೋಜನ ಪಡೆದರು.