×
ADVERTISEMENT
ಈ ಕ್ಷಣ :
ADVERTISEMENT

ಅಮೃತ ಮಹೋತ್ಸವ ಯಕ್ಷಗಾನ ಪ್ರದರ್ಶನ: ಪ್ರೇಕ್ಷಕರನ್ನು ಸೆಳೆಯುವ ಹೊಸ ಪ್ರಸಂಗ

Published : 15 ಅಕ್ಟೋಬರ್ 2021, 12:11 IST
ಫಾಲೋ ಮಾಡಿ
Comments

ಕೋಟ(ಬ್ರಹ್ಮಾವರ): ‘ಪೌರಾಣಿಕ ಕಥಾ ಹಂದರ ಆಧರಿಸಿ ಹೊಸತಲೆಮಾರಿನ ಪ್ರಸಂಗಕರ್ತರು ಪ್ರಸಂಗಗಳನ್ನು ರಚಿಸುತ್ತಿರುವುದು ಸಂತೋಷದ ಸಂಗತಿ. ಜೊತೆಯಲ್ಲಿ ಅಂತಹ ಪ್ರಸಂಗಗಳು ಪ್ರೇಕ್ಷಕರನ್ನು ಯಕ್ಷಗಾನದ ಕಡೆಗೆ ಸೆಳೆಯುತ್ತಿರುವುದು ಅಭಿಮಾನದ ಸಂಗತಿ’ ಎಂದು ಬಹುಮೇಳಗಳ ಯಜಮಾನ ಪಿ.ಕಿಶನ್ ಹೆಗ್ಡೆ ಹೇಳಿದರು.

ಕೋಟ ಹಂದೆ ವಿಷ್ಣುಮೂರ್ತಿ ವಿನಾಯಕ ದೇವಸ್ಥಾನದ ಆವರಣದಲ್ಲಿ ಗುರುವಾರ ವಿನಾಯಕ ವಿವಿಧೋದ್ದೇಶ ಸಹಕಾರಿ ಸಂಘ ಮತ್ತು ಉಡುಪಿ ಜಿಲ್ಲಾ ಕನ್ನಡ ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ಯಕ್ಷದೇಗುಲ ತಂಡವು ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಸುಜಯೀಂದ್ರ ಹಂದೆ ವಿರಚಿತ ‘ರುರು ಪ್ರಮದ್ವರ’ ಯಕ್ಷಗಾನ ಪ್ರಸಂಗದ ಪ್ರಥಮ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ರಂಗ ನಿರ್ದೇಶಕ ಗೋಪಾಲಕೃಷ್ಣ ನಾಯರಿ ಮಾತನಾಡಿ, ‘ಜನಪದ ರಂಗಭೂಮಿ ಬಹು ಆಯಾಮಗಳಲ್ಲಿ ಬಹು ಜನರನ್ನು ಮುಕ್ತವಾಗಿ ತಲುಪುವ ಕಾರಣ ರಂಜನೆಯ ಜೊತೆಯಲ್ಲಿ ಅವರನ್ನು ಪ್ರಜ್ಞಾವಂತರನ್ನಾಗಿಸುತ್ತದೆ’ ಎಂದರು. ಪ್ರಸಂಗಕರ್ತ ಹಾಗೂ ಉಪನ್ಯಾಸಕ ಸುಜಯೀಂದ್ರ ಹಂದೆ ಅವರನ್ನು ಸನ್ಮಾನಿಸಲಾಯಿತು.

ಸಾಲಿಗ್ರಾಮ ಗುರುನರಸಿಂಹ ದೇವಳದ ಆಡಳಿತ ಮಂಡಳಿ ಅಧ್ಯಕ್ಷ ಡಾ.ಕೆ.ಎಸ್.ಕಾರಂತ, ‘ತ್ರಿಕಣ್ಣೇಶ್ವರಿ’ ಮಾಸ ಪತ್ರಿಕೆಯ ಸಂಪಾದಕ ತೇಜೇಶ್ವರ ರಾವ್, ಸಾಲಿಗ್ರಾಮ ಮಕ್ಕಳ ಮೇಳದ ನಿರ್ದೇಶಕ ಶ್ರೀಧರ ಹಂದೆ, ಕರ್ನಾಟಕ ಕಲಾದರ್ಶಿನಿಯ ಮಂಗಳೂರಿನ ಜನಾರ್ದನ ಹಂದೆ, ಹಂದೆ ದೇವಸ್ಥಾನ ಆಡಳಿತ ಮಂಡಳಿ ಸದಸ್ಯ ವೆಂಕಟರಮಣ ಸೋಮಾಯಾಜಿ ಉಪಸ್ಥಿತರಿದ್ದರು.

ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಅಮರ ಹಂದೆ ಸ್ವಾಗತಿಸಿದರು. ಮಂಜುನಾಥ ಉರಾಳ ವಂದಿಸಿದರು. ಉಪನ್ಯಾಸಕ ರಾಘವೇಂದ್ರ ತುಂಗ ನಿರೂಪಿಸಿದರು.

‘ಪೌರಾಣಿಕ ಕಥಾ ಹಂದರ ಆಧರಿಸಿ ಹೊಸತಲೆಮಾರಿನ ಪ್ರಸಂಗಕರ್ತರು ಪ್ರಸಂಗಗಳನ್ನು ರಚಿಸುತ್ತಿರುವುದು ಸಂತೋಷದ ಸಂಗತಿ. ಜೊತೆಯಲ್ಲಿ ಅಂತಹ ಪ್ರಸಂಗಗಳು ಪ್ರೇಕ್ಷಕರನ್ನು ಯಕ್ಷಗಾನದ ಕಡೆಗೆ ಸೆಳೆಯುತ್ತಿರುವುದು ಅಭಿಮಾನದ ಸಂಗತಿ’ ಎಂದು ಬಹುಮೇಳಗಳ ಯಜಮಾನ ಪಿ.ಕಿಶನ್ ಹೆಗ್ಡೆ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT