×
ADVERTISEMENT
ಈ ಕ್ಷಣ :
ADVERTISEMENT

ಶಿರಸಿ: ಅಂಗಾಂಗದಾನ ಜಾಗೃತಿಗೆ ಚಾಲನೆ

ಫಾಲೋ ಮಾಡಿ
Comments

ಶಿರಸಿ: ಪರೋಪಕಾರ ತತ್ವ ಬೆಳೆಸಿಕೊಂಡು ಸಮಾಜದಲ್ಲಿ ಒಳ್ಳೆಯ ಕೆಲಸಕ್ಕೆ ನೆರವಾಗುವ ಗುಣ ಪ್ರತಿಯೊಬ್ಬರಲ್ಲೂ ಬೆಳೆಯಬೇಕಿದೆ ಎಂದು ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ಇಲ್ಲಿನ ಸಿದ್ಧಗಂಗಾ ಶಿವಕುಮಾರ ಸ್ವಾಮೀಜಿ ಸೇವಾ ಸಮಿತಿ ಹಮ್ಮಿಕೊಂಡಿರುವ ಅಂಗಾಂಗ ದಾನಗಳ ಕುರಿತು ಜನಜಾಗೃತಿ ಮೂಡಿಸುವ ಅಭಿಯಾನಕ್ಕೆ ಶುಕ್ರವಾರ ಮಠದ ಆವರಣದಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ‘ಅನ್ನ, ಅಕ್ಷರ ದಾಸೋಹದಿಂದ ಲಕ್ಷಾಂತರ ಸತ್ಪ್ರಜೆಗಳನ್ನು ಶಿವಕುಮಾರ ಸ್ವಾಮೀಜಿ ರೂಪಿಸಿದರು. ಅವರು ತೋರಿದ ಮಾರ್ಗದಲ್ಲಿ ಸಾಗುವ ಕೆಲಸ ಮಾಡಬೇಕು’ ಎಂದರು.

ವಾಯುವ್ಯ ಸಾರಿಗೆ ಸಂಸ್ಥೆಯ ಬಸ್‍ಗೆ ಜಾಗೃತಿ ಮೂಡಿಸುವ ಸಂದೇಶಗಳಿರುವ ಸ್ಟಿಕ್ಕರ್ ಅಂಟಿಸಲಾಯಿತು. ಶಿರಸಿ ಸಾರಿಗೆ ಘಟಕದ ವ್ಯವಸ್ಥಾಪಕ ಆರ್.ಸರ್ವೇಶ್, ಸೇವಾ ಸಮಿತಿಯ ವಿ.ಎಂ.ಪ್ರವೀಣ್, ಜ್ಯೋತಿ ಪಾಟೀಲ, ಕೃಷ್ಣ ಪದಕಿ ಇತರರು ಇದ್ದರು.  

ಪರೋಪಕಾರ ತತ್ವ ಬೆಳೆಸಿಕೊಂಡು ಸಮಾಜದಲ್ಲಿ ಒಳ್ಳೆಯ ಕೆಲಸಕ್ಕೆ ನೆರವಾಗುವ ಗುಣ ಪ್ರತಿಯೊಬ್ಬರಲ್ಲೂ ಬೆಳೆಯಬೇಕಿದೆ ಎಂದು ರುದ್ರದೇವರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT