ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮರಾಠಾ ಸಮುದಾಯದ ಸಭಾಭವನಕ್ಕೆ ಸುಳ್ಳು ಮಾಹಿತಿ ನೀಡಿ ಅನುದಾನ ದುರ್ಬಳಕೆ ಮಾಡಿಕೊಂಡಿರುವದು ಸಾಬೀತಾಗಿರುವ ಕಾರಣಕ್ಕೆ ಲೋಕಾಯುಕ್ತ ನ್ಯಾಯಾಲಯ ಮೂರು ತಿಂಗಳೊಳಗೆ ಕ್ರಮಕೈಗೊಳ್ಳುವಂತೆ ರಾಜ್ಯಪಾಲರಿಗೆ ಡಿ.6 ರಂದು ಸೂಚನೆ ನೀಡಿದೆ. ಈ ಬಗ್ಗೆ ದಾಖಲೆ ಇದ್ದರೂ ಘೋಟ್ನೇಕರ್ ಇಲ್ಲಸಲ್ಲದ ಹೇಳಿಕೆ ನೀಡಿ ಕಾನೂನಿಗೆ ಅಗೌರವ ತೋರಿದ್ದಾರೆ’ ಎಂದರು.