ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಗರಿಬೊಮ್ಮನಹಳ್ಳಿಯಲ್ಲಿ ನನಗೆ ಪಕ್ಷ ‘ಬಿ’ ಫಾರಂ ನೀಡಿತ್ತು. ಬಳಿಕ ತಿಪ್ಪೇಸ್ವಾಮಿ ಅವರನ್ನು ಕಣಕ್ಕಿಳಿಸಲಾಗಿತ್ತು. ಆದರೆ, ಅವರ ನಾಮಪತ್ರ ತಿರಸ್ಕೃತಗೊಂಡಿದೆ. ನಾನು ಕೂಡ ಪಕ್ಷದ ನಿರ್ಧಾರಕ್ಕೆ ಬೇಸತ್ತು ಪಕ್ಷೇತರನಾಗಿ ಕಣಕ್ಕಿಳಿಯಲು ಮುಂದಾಗಿದ್ದೆ. ಆದರೆ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪೃಥ್ವಿ ರೆಡ್ಡಿ ಅವರು ಕರೆ ಮಾಡಿ, ನಡೆದ ಎಲ್ಲ ಬೆಳವಣಿಗೆಗಳ ಬಗ್ಗೆ ಕ್ಷಮೆ ಕೇಳಿದ್ದಾರೆ. ಹಾಗಾಗಿ ಎಎಪಿ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇನೆ. ಕಾಳಿದಾಸ್ ಕೂಡ ಜಿಲ್ಲಾಧ್ಯಕ್ಷರಾಗಿ ಮುಂದುವರೆಯಲಿದ್ದಾರೆ ಎಂದು ಮಾಹಿತಿ ಹಂಚಿಕೊಂಡರು.
ಹಲವು ತಿಂಗಳಿಂದ ಹಗರಿಬೊಮ್ಮನಹಳ್ಳಿಯಲ್ಲಿ ಪಕ್ಷದ ಸಂಘಟನೆಗೆ ಕೆಲಸ ಮಾಡಿದ್ದೇನೆ. ಚುನಾವಣೆಯಲ್ಲಿ ಗೆದ್ದರೆ ಭ್ರಷ್ಟಾಚಾರರಹಿತ ಆಡಳಿತ ಕೊಡುವ ಭರವಸೆ ಕೊಟ್ಟಿದ್ದೇನೆ. ಮತದಾರರು ಬೆಂಬಲಿಸುವ ಭರವಸೆ ಇದೆ ಎಂದು ಹೇಳಿದರು.
ಎಎಪಿ ಮುಖಂಡರಾದ ಕೊಟ್ರೇಶ್, ಶಬ್ಬೀರ್, ಜೋಗಿ ರೇವಣ್ಣ, ಶಶಿಧರ್, ನಿತಿನ್ ಹಾಜರಿದ್ದರು.