×
ADVERTISEMENT
ಈ ಕ್ಷಣ :
ADVERTISEMENT

ಕಲುಷಿತ ನೀರು ಸೇವನೆ: ಮಕರಬ್ಬಿಯಲ್ಲಿ ವಾಂತಿಭೇದಿ; ಸಾವಿನ ಸಂಖ್ಯೆ 7ಕ್ಕೆ

Published : 10 ಅಕ್ಟೋಬರ್ 2021, 14:53 IST
ಫಾಲೋ ಮಾಡಿ
Comments

ಹೂವಿನಹಡಗಲಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರು ಭಾನುವಾರ ಸಂಜೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7 ಕ್ಕೆ ಏರಿದೆ.

ದೊಡ್ಡಬಾರಿಕರ ನಾಗಮ್ಮ (65) ಗಂಡ ಸಿದ್ದಪ್ಪ ಎಂಬುವವರು ಮೃತಪಟ್ಟಿದ್ದಾರೆ. 10 ದಿನಗಳ ಹಿಂದೆ ಮಹಿಳೆಗೆ ವಾಂತಿಭೇದಿ ಕಾಣಿಸಿಕೊಂಡಿತ್ತು. ಗ್ರಾಮದಲ್ಲಿ ತೆರೆಯಲಾಗಿದ್ದ ತಾತ್ಕಾಲಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಭಾನುವಾರ ಬೆಳಿಗ್ಗೆ ಮತ್ತೆ ವಾಂತಿಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿದ್ದರಿಂದ ತಾತ್ಕಾಲಿಕ ಆಸ್ಪತ್ರೆಗೆ ಕರೆ ತರಲಾಗಿತ್ತು. ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ  ತಾಲ್ಲೂಕು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಮಕರಬ್ಬಿಯಲ್ಲಿ 15 ದಿಗಳ ಹಿಂದೆ ಕಲುಷಿತ ನೀರು ಸೇವಿಸಿ 170ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಈ ಪೈಕಿ ಗಂಭೀರ ಸ್ಥಿತಿಯಲ್ಲಿದ್ದ 33 ಜನರನ್ನು ಹೂವಿನಹಡಗಲಿ, ಹೊಳಲು, ಹುಬ್ಬಳ್ಳಿ, ಹಾವೇರಿ, ರಾಣೇಬೆನ್ನೂರು ಆಸ್ಪತ್ರೆಗಳಿಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ 10 ದಿನಗಳ ಅವಧಿಯಲ್ಲಿ 6 ಜನರು ಮೃತಪಟ್ಟಿದ್ದರು. ಹುಬ್ಬಳ್ಳಿಯ ಆಸ್ಪತ್ರೆಗಳಲ್ಲಿ ಮೂವರು, ದಾವಣಗೆರೆಯಲ್ಲಿ ಇಬ್ಬರು, ಗದಗ ಆಸ್ಪತ್ರೆಯಲ್ಲಿ ಒಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮದಲ್ಲಿ ವಾಂತಿಭೇದಿ ನಿಯಂತ್ರಣದಲ್ಲಿದ್ದರೂ ಈ ಹಿಂದೆ ಅಸ್ವಸ್ಥಗೊಂಡವರ ಆರೋಗ್ಯದಲ್ಲಿ ಏರುಪೇರು ಕಂಡು ಬರುತ್ತಿದೆ. ಸಾವಿನ ಸರಣಿ  ಮುಂದುವರಿದಿರುವುದರಿಂದ ಗ್ರಾಮದಲ್ಲಿ ಆತಂಕದ ಛಾಯೆ ಮೂಡಿದೆ.

ಹೂವಿನಹಡಗಲಿ ತಾಲ್ಲೂಕಿನ ಮಕರಬ್ಬಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಅಸ್ವಸ್ಥರಾಗಿದ್ದ ಮಹಿಳೆಯೊಬ್ಬರು ಭಾನುವಾರ ಸಂಜೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 7 ಕ್ಕೆ ಏರಿದೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT