ಅನುಕೂಲಸ್ಥರು ದುಬಾರಿ ಬೆಲೆಯ ಬ್ಯಾಟರಿ, ರೀಚಾರ್ಜ್ ವಿದ್ಯುತ್ ಚಿಮಣಿ ಬಳಸುತ್ತಾರೆ. ಕೆಲವರು ಮೇಣದ ಬತ್ತಿಗಳ ಮೊರೆ ಹೋಗಿದ್ದಾರೆ. ಆದರೆ, ಇದು ಎಲ್ಲರಿಗೂ ಕೈಗೆಟಕುವುದಿಲ್ಲ. ಇಷ್ಟೇ ಅಲ್ಲ, ಅನೇಕ ಹಳ್ಳಿಗಳಲ್ಲಿ ಈಗಲೂ ಯಾರಾದರೂ ಮೃತಪಟ್ಟರೆ ಕಟ್ಟಿಗೆ, ಕುಳ್ಳುಗಳನ್ನು ಬಳಸುತ್ತಾರೆ. ಆ ಸಂದರ್ಭದಲ್ಲಿ ಸೀಮೆ ಎಣ್ಣೆ ಹೆಚ್ಚಾಗಿ ಬಳಸುತ್ತಾರೆ. ಈಗ ಅದು ಕೂಡ ಸಿಗುತ್ತಿಲ್ಲ. ಅನಿವಾರ್ಯವಾಗಿ ಕೆಲವರು ಪೆಟ್ರೋಲ್, ಹತ್ತಿ ಎಣ್ಣೆ ಬಳಸುತ್ತಿದ್ದಾರೆ. ಇದು ಅವರಿಗೆ ಆರ್ಥಿಕ ಹೊರೆಯಾಗಿ ಪರಿಣಮಿಸಿದೆ.