‘ಕಾರಿಗನೂರಿನಲ್ಲಿ ನಗರಸಭೆಗೆ ಸೇರಿದ ಘನತ್ಯಾಜ್ಯ ವಿಲೇವಾರಿ ಘಟಕದಿಂದ ಶ್ರೆಡರ್ ಮಶೀನ್ ಕಳುವಾಗಿತ್ತು. ಈ ಕುರಿತು ನಗರಸಭೆ ಪರಿಸರ ಎಂಜಿನಿಯರ್ ಆರತಿ ಗ್ರಾಮೀಣ ಪೊಲೀಸ್ ಠಾಣೆಗೆ ಮಂಗಳವಾರ ದೂರು ಕೊಟ್ಟಿದ್ದರು. ದೂರು ಆಧರಿಸಿ ಗ್ರಾಮೀಣ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಶ್ರೀನಿವಾಸ್ ಮೇಟಿ ನೇತೃತ್ವದಲ್ಲಿ ಎಎಸ್ಐ ಶಾಷಾವಲಿ, ಕಾನ್ಸ್ಟೆಬಲ್ಗಳಾದ ಬಿ. ರಾಘವೇಂದ್ರ, ಕೊಟ್ರೇಶ ಏಳಂಜಿ, ಪ್ರಕಾಶ್ ಕೆ., ರಮೇಶ ಓ., ಬಿ. ನಾಗರಾಜ, ಕೆ. ಸುಭಾಷ ಅವರನ್ನು ಒಳಗೊಂಡ ತಂಡ ರಚಿಸಲಾಗಿತ್ತು. ತಂಡವು ಕಾರ್ಯಾಚರಣೆ ನಡೆಸಿ, ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸೆಕ್ಯುರಿಟಿ ಆಗಿ ಕೆಲಸ ನಿರ್ವಹಿಸುತ್ತಿದ್ದ ರಮೇಶ ಹಾಗೂ ಇತರೆ ಇಬ್ಬರನ್ನು ಬಂಧಿಸಿ, ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ., ಬುಧವಾರ ತಿಳಿಸಿದ್ದಾರೆ.